ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಅಪಘಾತ ➤ ಗಾಯಗೊಂಡ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಡಿ.4ರ ಶುಕ್ರವಾರದಂದು ಸಂಜೆ ಐಯಾನ್‌‌ ತನ್ನ ಮನೆಯ ಮುಂದಿನ ರಸ್ತೆ ದಾಟುತ್ತಿದ್ದ ಸಂದರ್ಭ ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ರಿಟ್ಜ್‌‌ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿದ್ದು, ಬಳಿಕ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಇದೀಗ ಗಾಯಗೊಂಡಿದ್ದ ಬಾಲಕ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಬಶೀರ್ ಅಹ್ಮದ್ ಹಾಗೂ ರಿಯಾನ್ ದಂಪತಿಗಳ ಹಿರಿಯ ಪುತ್ರ ಐಯಾನ್(16) ಎಂದು ಗುರುತಿಸಲಾಗಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group