ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಡಿ.12: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾ.ಹೆ. 75ರಲ್ಲಿ ಗುರುವಾರ ಇಳಿಸಂಜೆ ಬೈಕ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ವಿಟ್ಲದ ಜನಪ್ರಿಯ ಬಾಣಸಿಗ ಕಾಂತಡ್ಕ ಶಂಕರನಾರಾಯಣ ಭಟ್ (58) ಮೃತಪಟ್ಟಿದ್ದಾರೆ.

ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಬರುತ್ತಿದ್ದ ಅವರ ಬೈಕ್, ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಘಟಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ವಿಟ್ಲ ಪರಿಸರದ ಜನಾನುರಾಗಿ ಬಾಣಸಿಗರಾಗಿದ್ದ ಅವರು, ಹಲವಾರು ದೇವಸ್ಥಾನಗಳ ದೊಡ್ಡ ಪ್ರಮಾಣದ ಅಡುಗೆಯನ್ನು ಮಾಡುವುದರಲ್ಲಿ ನಿಷ್ಣಾತರಾಗಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

 

 

 

error: Content is protected !!

Join the Group

Join WhatsApp Group