ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಅಡ್ಡೂರಿನಲ್ಲಿ ಯುವಕನೋರ್ವನ‌ ಮೇಲೆ ಮೂವರು ದುಷ್ಕರ್ಮಿಗಳ ತಂಡ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ.ಗಾಯಾಳುವನ್ನು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ - ಶೇ.93.12 ಫಲಿತಾಂಶ ದಾಖಲು

 

 

error: Content is protected !!
Scroll to Top