ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 19. ಉಜಿರೆಯಲ್ಲಿ 8 ವರ್ಷದ ಬಾಲಕ ಅನುಭವ್ ಎಂಬಾತನನ್ನು ಕಿಡ್ನಾಪ್ ಮಾಡಿದ್ದ 7 ಮಂದಿಯನ್ನು ಕೋಲಾರ ಜಿಲ್ಲೆಯ ಮಾಸ್ತಿ ಎಂಬಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗುರುವಾರ ಸಂಜೆ ಉದ್ಯಮಿಯೋರ್ವರ ಪುತ್ರ 8 ವರ್ಷದ ಅನುಭವ್ ಎಂಬ ಬಾಲಕನನ್ನು ಅಪಹರಣ ಮಾಡಿದ್ದ ಆರೋಪಿಗಳು 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ, ಇದೀಗ ಕೋಲಾರ ಜಿಲ್ಲೆ ಮಾಸ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕನನ್ನು ರಕ್ಷಿಸಲಾಗಿದ್ದು, ಮಾಸ್ತಿ ಠಾಣೆಯಲ್ಲಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಉಜಿರೆಗೆ ಕರೆತರಲಾಗುವುದು ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group