ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕರಿಸಿದರು.

 

ನಿಂಗಯ್ಯ ಅವರು ಈ ಹಿಂದೆ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತಿದ್ದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಈ ಹಿಂದಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಂದ ಅಧಿಕಾರ ಸ್ವೀಕರಿಸಿದರು.ರವೀಂದ್ರ ಅವರು ಶ್ರೀ ಕಂಠೇಶ್ವರ ದೇವಸ್ಥಾನ ನಂಜನಗೂಡಿಗೆ ವರ್ಗಾವಣೆಗೊಂಡಿದ್ದಾರೆ. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗ ಮುಖ್ಯಸ್ಥ ಜಯರಾಮ ರಾವ್‌, ಸಿಬ್ಬಂದಿ ಉಪಸ್ಥಿತರಿದ್ದರು.

 

error: Content is protected !!

Join the Group

Join WhatsApp Group