ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿಯ ಭದ್ರತೆ ಕಲ್ಪಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜ.01. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಾದ ಪೇಜಾವರ ಮಠಾಧೀಶರಿಗೆ ರಾಜ್ಯ ಸರ್ಕಾರವು ‘ವೈ’ ಭದ್ರತೆ ಒದಗಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮಮಂದಿರದ ಮೇಲ್ವಿಚಾರಣೆಯನ್ನು ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಲ್ಲಿ ಒಬ್ಬರಾಗಿರುವ ಪೇಜಾವರ ಶ್ರೀಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿರುವ ರಾಜ್ಯ ಸರಕಾರವು ವೈ ಶ್ರೇಣಿಯ ಭದ್ರತೆ ನೀಡಿ ಆದೇಶಿಸಿದೆ.

Also Read  ಸಮ್ಯಕ್ತ್ ಜೈನ್ ರವರಿಗೆ ಜೈನ ಕಾಶಿ ಮೂಡಬಿದಿರೆಯಲ್ಲಿ "ಜೈನ ಯುವ ಸಾಹಿತಿ" ಸನ್ಮಾನ ➤ ಸ್ವಸ್ತಿಶ್ರೀ ಭಾರತಭೂಷಣ ಭಟ್ಟಾರಕ ಚಾರುಕೀರ್ತಿ ಸ್ವಾಮಿಗಳ ಪಾವನ ಸಾನಿಧ್ಯ

error: Content is protected !!
Scroll to Top