ರಸ್ತೆ ಬದಿ ನಿಂತಿದ್ದ ಲಾರಿಗೆ ಓಮ್ನಿ ಢಿಕ್ಕಿ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 07. ನಿಂತಿದ್ದ ಲಾರಿಗೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ತಾಲೂಕಿನ ಕ್ಯಾದಿಗೆರೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ರೇಣುಕಮ್ಮಾ ಶಂಕರ್ ಪುಟ್ಟಲಿಂಗಯ್ಯ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನುಳಿದ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಚಿತ್ರದುರ್ಗ ಠಾಣಾ ಸಿಪಿಐ ಚಂದ್ರನಾಯಕ್ ಪರಿಶೀಲನೆ ನಡೆಸಿದ್ದಾರೆ.

Also Read  ➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ

error: Content is protected !!
Scroll to Top