ಬೆಳ್ತಂಗಡಿ: ಹೊಳೆಯಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 11. ಹೊಳೆಯಲ್ಲಿ ಮುಳುಗಿ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ‌ ಕಕ್ಕಿಂಜೆ ಸಮೀಪದ ಚಿಬಿದ್ರೆ ಎಂಬಲ್ಲಿ ನಡೆದಿದೆ.

ಮೃತ ಬಾಲಕನನ್ನು ಇನಾಯತುಲ್ಲಾ(೮) ಎಂದು ಗುರುತಿಸಲಾಗಿದೆ. ರವಿವಾರದಂದು ಚಿಕ್ಕಮಗಳೂರಿನಿಂದ ಅಜ್ಜಿ ಮನೆಗೆಂದು ಬಂದಿದ್ದ ಈತ ಉಪಹಾರ ಮುಗಿಸಿ ಮನೆಯವರೊಂದಿಗೆ ಎಂದಿನಂತೆ ಮನೆಯ ಪಕ್ಕದಲ್ಲೇ ಇದ್ದ ನದಿಗೆ ಬಟ್ಟೆ ತೊಳೆಯಲು ಹಾಗೂ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನದಿನೀರಿನಲ್ಲಿ ಆಟದಲ್ಲಿ ನಿರತನಾಗಿದ್ದ ಈತ ಎಲ್ಲರ ಕಣ್ಮುಂದೆಯೇ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಬಾಲಕನನ್ನು ನೀರಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ - ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು

error: Content is protected !!
Scroll to Top