ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, 15. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಈಚರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ.

ಮೃತ ಸವಾರನನ್ನು ಕೊಕ್ಕಡ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ಪೂವಪ್ಪ ಗೌಡ(44) ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಈಚರ್ ಲಾರಿಯು ಢಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ‌. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಈಚರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group