ಜ.31 ರಂದು ಕಡಬದ ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆ ➤ ಕಡಬ ತಹಶೀಲ್ದಾರ್ ಅನಂತ ಶಂಕರ್ ರಿಂದ ಸ್ಥಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಜ.26. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಮಂಗಳೂರು, ಕಡಬ ತಾಲೂಕು ಪತ್ರಕರ್ತರ ಸಂಘ(ರಿ.) ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ಕಡಬ ತಾಲೂಕು ಪಂಚಾಯತ್, ಕೊಂಬಾರು ಗ್ರಾಮ ಪಂಚಾಯತ್ ಇವುಗಳ ಸಹಭಾಗಿತ್ವದಲ್ಲಿ ಜನವರಿ 31 ಭಾನುವಾರದಂದು ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಸ್ಥಳಕ್ಕೆ ಕಡಬ ತಹಶೀಲ್ದಾರ್ ಅನಂತ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಉಪ ತಹಶೀಲ್ದಾರ್ ಮನೋಹರ್ ಕೆ.ಟಿ., ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ., ಕಾರ್ಯದರ್ಶಿ ವಿಜಯ ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಚಿದಾನಂದ, ಎಸ್ಡಿಎಂಸಿ ಅಧ್ಯಕ್ಷ ಶಿವಪ್ರಸಾದ್, ಕಂದಾಯ ಇಲಾಖೆಯ ರಂಜನ್ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group