ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ಕಾರು ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಾಳಾದ ಘಟನೆ ಮಾಣಿ-ಮೈಸೂರು ರಾ.ಹೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ನಡೆದಿದೆ.

ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ರಾ.ಹೆ ಪರ್ಲಡ್ಕ ರಸ್ತೆಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ‌. ಘಟನೆಯಿಂದ ಓಮ್ನಿ ಕಾರಿನಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group