ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ➤ ಸೂಕ್ತ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

(ನ್ಯೂಸ್ ಕಡಬ) newskadaba.com ಶೃಂಗೇರಿ, ಫೆ. 04. ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರವಾದ ಅತ್ಯಾಚಾರ ಅತ್ಯಂತ ಖೇದಕರವಾದುದು, ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸಂಸದೆ ಶೋಭಾ ಕರಂದ್ಲಾಜೆ ಆದೇಶಿಸಿದ್ದಾರೆ.

ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣವೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗಪಡಿಸಿದ ಅವಳ ಚಿಕ್ಕಮ್ಮ ಗೀತಾಳನ್ನು ಕೂಡಾ ಬಂಧಿಸಿ ವಿಚಾರಿಸಲಾಗುತ್ತಿದೆ. SSLC ಓದುವ ಹುಡುಗಿ ತನ್ನ ಊರಿನಿಂದ ಇಲ್ಲಿಗೆ ಯಾಕೆ ಬಂದಳು? ಯಾಕೆ ಅವಳನ್ನು ಚಿಕ್ಕಮ್ಮ ದುರುಪಯೋಗ ಮಾಡಿದಳು? ಇದೇ ರೀತಿ ಇನ್ಯಾವ ಹುಡುಗಿಯ ಜೊತೆ ಗೀತಾ ಸಂಪರ್ಕ ಬೆಳೆಸಿದ್ದಾಳೆ ಎಂಬುವುದರ ಕುರಿತು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.

error: Content is protected !!

Join the Group

Join WhatsApp Group