ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ನಿವಾಸಕ್ಕೆ ಕಲ್ಲಡ್ಕ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 06. ಅಯೋಧ್ಯೆ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಹಿನ್ನೆಲೆ ಕಾಂಗ್ರೆಸ್ ಮುಖಂಡ ಬಂಟ್ವಾಳ ಬಿಸಿ ರೋಡಿನಲ್ಲಿರುವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದರು.


ಕಲ್ಲಡ್ಕ ಭಟ್ ಪೂಜಾರಿಯವರ ಕಾಲಿಗೆ ನಮಸ್ಕರಿಸಿ, ಅವರ ಆರೋಗ್ಯ ವಿಚಾರಿಸಿದರು.ರಾಮಮಂದಿರ ನಿರ್ಮಾಣಕ್ಕೆ ಪೂಜಾರಿಯವರು ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭ ಪ್ರಭಾಕರ್ ಭಟ್ ಪತ್ನಿ ಕಮಲಾ ಪ್ರಭಾಕರ್ ಭಟ್ ಹಾಗೂ ಹಿಂದೂ ಮುಖಂಡರು ಜೊತೆಗಿದ್ದರು.

Scroll to Top