ಕಾಪು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಫೆ. 18. ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲಾರು ಎಂಬಲ್ಲಿ ನಡೆದಿದೆ.

ಮೃತರನ್ನು ಯು. ಶಾಬುದ್ದೀನ್ ಸಾಹೇಬ್ ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಯು. ಶಾಬುದ್ದೀನ್ ರವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group