ಚುನಾವಣೆಗೆ ಟಿಕೆಟ್ ನೀಡಿ- ಇದು ನನ್ನ ಕೊನೆಯ ಚುನಾವಣೆ ➤ ಪ್ರಮೋದ್ ಮುತಾಲಿಕ್

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಮಾ. 07. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ, ಈಗಾಗಲೇ ನನಗೆ 66 ವರ್ಷ ವಯಸ್ಸಾಗಿದೆ. ಇದೇ ನನ್ನ ಕೊನೆ ಚುನಾವಣೆ, ಹೀಗಾಗಿ ನನಗೆ ಟಿಕೆಟ್‌ ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು, ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಟಿಕೆಟ್ ಸಿಗುವ ಭರವಸೆ ಇದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಇನ್ನೂ ಮೂರು ವರ್ಷ ಅವಧಿಯಿದ್ದು, ಚುನಾವಣೆಯಲ್ಲಿ ಗೆದ್ದರೆ ಅಭಿವೃದ್ಧಿ ಹಿಂದುತ್ವದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Also Read  ಪಂಜ: ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ಕರ್ತವ್ಯಕ್ಕೆ ಹಾಜರು

error: Content is protected !!
Scroll to Top