ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆಯವರಿಗೆ ದಿ.ರಾಜೇಶ್ ಶಿಬಾಜೆ ಪತ್ರಿಕೋದ್ಯಮ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.16. ಬೆಂಗಳೂರು ಪತ್ರಕರ್ತರ ವೇದಿಕೆಯ ಉಡುಪಿ ಜಿಲ್ಲಾ ಘಟಕ ನೀಡುವ ಪತ್ರಕರ್ತ ದಿ.ರಾಜೇಶ್ ಶಿಬಾಜೆ ರಾಜ್ಯ ಪ್ರಶಸ್ತಿಗೆ ಸುಳ್ಯ ಸುದ್ದಿ ಚಾನೆಲ್ ಹಾಗೂ ಸುದ್ದಿ ವೆಬ್ ಸೈಟ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆಯವರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನವು ಉಡುಪಿಯ ಜಗನ್ನಾಥ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತ ವೇದಿಕೆಯ ಅಧ್ಯಕ್ಷ ಡಾ.ಶೇಖರ ಅಜೆಕಾರು, ಕ.ಸಾ.ಪ. ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಲಾವಿದ ಪಿ.ಎನ್.ಆಚಾರ್ಯ, ಶಿಕ್ಷಣ ತಜ್ಞ ಪ್ರೋ. ನರಹರಿ, ಭಾರತೀಯ ಸಂಸ್ಕೃತಿ ಪ್ರತಿಷ್ಠಾನದ ರಾಜಶೇಖರ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

 

 

error: Content is protected !!

Join the Group

Join WhatsApp Group