ವಿಶ್ವ ಜಲ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 23. ವಿಶ್ವ ಜಲ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲೆಯ ಮಡಂತ್ಯಾರ್ ಯುನಿಟ್ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ ಮಾಡಲಾಯಿತು.


ಭಿತ್ತಿ ಪತ್ರಗಳಲ್ಲಿ ನೀರಿನ ಸಂರಕ್ಷಣೆ ಕುರಿತು ಮತ್ತು ಅವಶ್ಯಕತೆಗಳ ಕುರಿತು ಘೋಷಣೆಗಳನ್ನು ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರಾದ ಸದಾಫ್ ಬೆಳ್ತಂಗಡಿ ಹಾಗೂ ಮಡಂತ್ಯಾರ್ ಯುನಿಟ್ ನಾಯಕರು ಉಪಸ್ಥಿತರಿದ್ಧರು.

Scroll to Top