ದ್ವಿಚಕ್ರ ವಾಹನ ಅಪಘಾತ ➤ ಆರೋಗ್ಯ ಕೇಂದ್ರಾಧಿಕಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 26. ಇಲ್ಲಿನ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ರಸ್ತೆ ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ.

 

ಮೃತರನ್ನು ಕನ್ಯಾಕುಮಾರಿ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಕರ್ತವ್ಯ ಮುಗಿಸಿ ಸ್ಕೂಟಿಯಲ್ಲಿ ಕಲಬುರಗಿಗೆ ಹೋಗುತ್ತಿದ್ದ ವೇಳೆ ಎತ್ತಿನ ಬಂಡಿಗೆ ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

 

error: Content is protected !!
Scroll to Top