? ಉಡುಪಿ: ಪೆಟ್ರೋಲ್ ಪಂಪ್ ಮಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 26. ಪೆಟ್ರೋಲ್ ಪಂಪ್ ಮಾಲಕರೋರ್ವರು ಕಟ್ಟಡದಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಮಠದಬೆಟ್ಟು ಎಂಬಲ್ಲಿ ಶುಕ್ರವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತಮ್ ನಾಯಕ್ (30) ಎಂದು ಗುರುತಿಸಲಾಗಿದೆ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರು, ಮಠದಬೆಟ್ಟುವಿನ ಫ್ಲಾಟ್‍ವೊಂದರ 3ನೇ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ತಂದೆ ಮತ್ತು ತಮ್ಮ ಮಾತ್ರ ಇದ್ದು, ಪತ್ನಿ ಮುಂಬೈನಲ್ಲಿದ್ದರು ಎನ್ನಲಾಗಿದೆ. ಇವರು ಇಂದು ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group