ರಾಜ್ಯದಾದ್ಯಂತ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ 6ರಿಂದ 9ನೇ ವರೆಗೆ ಶಾಲೆ ಬಂದ್- ಶಿಕ್ಷಣ ಸಚಿವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 01. ರಾಜ್ಯದಾದ್ಯಂತ ಕೊರೋನಾ ರಾದ್ದಾಂತ ಹೆಚ್ಚಳವಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿವರೆಗಿನ ಶಾಲೆಯನ್ನು ಬಂದ್ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

ಬೆಂಗಳೂರಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 6 ರಿಂದ 9ನೇ ವರೆಗಿನ ತರಗತಿಗಳನ್ನು ಮುಂದಿನ ಆದೇಶದವರೆಗೂ ಬಂದ್ ಮಾಡಲಾಗಿದ್ದು, ಎಸ್ಸೆಸ್ಸೆಲ್ಸಿ ತರಗತಿಗಳು ಎಂದಿನಂತೆಯೇ ನಡೆಯಲಿದೆ ಎಂದ ಅವರು, ವಿದ್ಯಾರ್ಥಿಗಳಿಗೆ ತರಗತಿಗಳಿಗೆ ನೀಡಲಾದ ಕಡ್ಡಾಯ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also Read  ಈಜುಕೊಳಗಳನ್ನು ತೆರೆಯದಂತೆ ಹಾಗೂ ಗ್ರಾಹಕರು ಅಥವಾ ಸಾರ್ವಜನಿಕರು ಬಳಸದಂತೆ ಜಿಲ್ಲಾಧಿಕಾರಿ ಆದೇಶ

error: Content is protected !!
Scroll to Top