ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಉಡುಪಿ, ಮೇ. 29. ಲಕ್ಷದ್ವೀಪದ ಮೂಲ ನಿವಾಸಿಗಳ ಧಾರ್ಮಿಕ, ಸಾಂಸ್ಕೃತಿಕ, ಭಾಷಿಕ ಅಸ್ಮಿತೆ ಮತ್ತು ನಾಗರಿಕ ಹಕ್ಕುಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ತಾಳುತ್ತಿರುವ ನಡೆಗಳು ಮತ್ತು ಬಿಜೆಪಿ ನಾಯಕ ಮತ್ತು ಮೋದಿಯ ನಿಕಟವರ್ತಿ ಪ್ರಫುಲ್ ಪಟೇಲ್ ರನ್ನು ಅಲ್ಲಿನ ಆಡಳಿತಾಧಿಕಾರಿಯನ್ನಾಗಿ ನೇಮಿಸಿರುವುದರ ಹಿಂದೆ ಇರುವಂತಹ ದುಷ್ಟ ಉದ್ದೇಶವನ್ನು ಖಂಡಿಸಿ ಮತ್ತು ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಉಡುಪಿ ಜಿಲ್ಲಾದ್ಯಂತ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಬಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

Scroll to Top