ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ತಿಳಿಸಿದ್ದಾರೆ.

 

ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್​ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್​ಗಳ ಹೆಚ್ಚಳ ಮಾಡಿದ್ದು, ಆಸ್ಪತ್ರೆಗಳಲ್ಲಿ 60 ರಿಂದ 80 ಬೆಡ್​ಗೆ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು. ಇನ್ನು ಮೂರನೇ ಅಲೆಯಲ್ಲಿ ಸೋಂಕು ಮಕ್ಕಳಿಗೆ ಹೆಚ್ಚು ಕಾಡಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದೇ ಕಾರಣಕ್ಕೆ ಮಕ್ಕಳಿಗೆ ಚಿಕಿತ್ಸೆ ಕೊಡಲು ವೈದ್ಯರಿಗೆ ತರಬೇತಿ ನೀಡಿದ್ದೇವೆ ಎಂದರು.

Also Read  ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ..! ➤ ಇಬ್ಬರು ವಿದ್ಯಾರ್ಥಿಗಳು ವಶಕ್ಕೆ

 

 

 

error: Content is protected !!
Scroll to Top