ರಾಜ್ಯದಲ್ಲಿ ಈ ಬಾರಿ ವಿಭಿನ್ನವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ವಿಜ್ಞಾನ, ಗಣಿತ ಹಾಗೂ ಸಮಾಜಶಾಸ್ತ್ರ ವಿಷಯಗಳನ್ನು ಒಂದೇ ಪೇಪರ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದರು. ಒಟ್ಟು ಎರಡು ಪರೀಕ್ಷೆಗಳು ನಡೆಯಲಿದ್ದು, ಕೊರೋನಾ ಬಾಧಿತರಿಗೆ ಮತ್ತೊಂದು ಸಲ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

Also Read  ಮಾ. 2 ಅಥವಾ 3ಕ್ಕೆ ಅಧಿಕಾರಿಗಳಿಂದಲೇ ಬಿಬಿಎಂಪಿ ಬಜೆಟ್‌ ಮಂಡನೆ ಸಾಧ್ಯತೆ

 

 

 

error: Content is protected !!
Scroll to Top