ರಾಜ್ಯದಲ್ಲಿ ಈ ಬಾರಿ ವಿಭಿನ್ನವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ವಿಜ್ಞಾನ, ಗಣಿತ ಹಾಗೂ ಸಮಾಜಶಾಸ್ತ್ರ ವಿಷಯಗಳನ್ನು ಒಂದೇ ಪೇಪರ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದರು. ಒಟ್ಟು ಎರಡು ಪರೀಕ್ಷೆಗಳು ನಡೆಯಲಿದ್ದು, ಕೊರೋನಾ ಬಾಧಿತರಿಗೆ ಮತ್ತೊಂದು ಸಲ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

 

 

 

error: Content is protected !!

Join the Group

Join WhatsApp Group