ರಾಜ್ಯದಲ್ಲಿ ಕೊರೋನಾ ಇಳಿಮುಖ ➤ ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.21: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 142 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,025ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 8,404 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,54,139ಕ್ಕೆ ಏರಿಕೆಯಾಗಿದೆ. ಇನ್ನು 1,23,134 ಸಕ್ರೀಯ ಪ್ರಕರಣಗಳಿವೆ.ರಾಜ್ಯಾದ್ಯಂತ ಇಂದು 1,49,731 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 4,867 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3.25ಕ್ಕೆ ಇಳಿದಿದೆ.

error: Content is protected !!

Join the Group

Join WhatsApp Group