ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

(ನ್ಯೂಸ್ ಕಡಬ) newskadaba,ಬಾಗಲಕೋಟೆ ಜೂ.24: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ಹಿಡಿದಿದ್ದ ಉರಗ ರಕ್ಷರೊಬ್ಬರು ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.

 

0 ವರ್ಷ ಪ್ರಾಯದ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿ. ಬುಧವಾರ ರಾತ್ರಿ ಗ್ರಾಮದಲ್ಲಿ ಹಾವು ಕಾಣಿಸಿಕೊಂಡಿತ್ತು, ನಂತರ ವಿಷಯ ತಿಳಿದ ಸದಾಶಿವ ಕರಣಿ, ಅಲ್ಲಿಗೆ ತೆರಳಿ ಹಾವನ್ನು ಹಿಡಿದಿದ್ದರು. ಹಾವನ್ನು ಹಿಡಿಯುವ ವೇಳೆ ಸದಾಶಿವ ಅವರಿಗೆ ಕಚ್ಚಿತ್ತು. ಬಳಿಕ ಸದಾಶಿವ ಅವರು ಮನೆಯಲ್ಲಿಯೇ ಗಿಡಮೂಲಿಕೆಗಳ ಔಷಧಿ ತೆಗೆದುಕೊಂಡಿದ್ದರು. ಆದರೆ ನಿನ್ನೆ ತಡರಾತ್ರಿ ಹಾವಿನ ವಿಷ ಹೆಚ್ಚಾಗಿ ಸಾವನ್ನಪ್ಪಿದ್ದಾರೆ.ಸದಾಶಿವ ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಕೆಲಸದಲ್ಲಿ ಭಾರೀ ಪ್ರಸಿದ್ಧಿಯನ್ನು ಪಡೆದಿದ್ದರು.

error: Content is protected !!

Join the Group

Join WhatsApp Group