ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿರುವಲ್ಲಿಗೆ ಹೋಗಿದ್ದ ಶಾಸಕ ಯು.ಟಿ.ಖಾದರ್ ಅವರು ಸ್ವತಃ ಗದ್ದೆಗಿಳಿದು ನಾಟಿ ಮಾಡಿ ಕೃಷಿಕರಿಗೆ ಸಾಥ್ ನೀಡಿದ್ದು, ಇದೀಗ ಇದರ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಶುಕ್ರವಾರ ನಗರದ ಕೊಣಾಜೆಯ ಕೆಳಗಿನ ಮನೆಯ ಹಡೀಲು ಬಿದ್ದ ಗದ್ದೆಯಲ್ಲಿ ನಾಗಬ್ರಹ್ಮ ಪ್ರಗತಿಪರ ಸಂಘ ಹಾಗೂ ಊರಿನ ಪ್ರಮುಖರು ಸೇರಿ ಭತ್ತದ ಕೃಷಿ ಮಾಡುವ ಸಂಕಲ್ಪ ಮಾಡಿದ್ದರು. ಇಲ್ಲಿಗೆ ಭತ್ತದ ಪೈರು ನಾಟಿ ಮಾಡಲು ಇಬ್ಬರು ಮಹಿಳೆಯರು ತೆರಳುತ್ತಿದ್ದರು. ಅದೇ ದಾರಿಯಾಗಿ ಹೋಗುತ್ತಿದ್ದ ಶಾಸಕ ಖಾದರ್ ಅವರು ಮಹಿಳೆಯರನ್ನು ‘ಎಲ್ಲಿಗೆ ಹೋಗುವುದೆಂದು’ ಕೇಳಿದ್ದಾರೆ. ಅವರು ‘ನಾಟಿ ಕೆಲಸಕ್ಕಾಗಿ’ ಎಂದು ಹೇಳಿದ್ದಾರೆ. ತಕ್ಷಣ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು, ನಾಟಿ ಕಾರ್ಯ ನಡೆಯುತ್ತಿರುವಲ್ಲಿಗೆ ಕರೆದೊಯ್ದಿದ್ದು ಬಿಟ್ಟಿದ್ದಾರೆ.ಹಾಗೆ ಬಂದವರು ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿರುವುದನ್ನು ಕಂಡು ಉತ್ಸಾಹದಿಂದ ಹಾಕಿರುವ ಪಂಚೆಯನ್ನು ಮೇಲಕ್ಕೆತ್ತಿ ಕಟ್ಟಿ, ತಲೆಗೆ ಮುಟ್ಟಾಲೆ ಇಟ್ಟು, ಭತ್ತದ ಪೈರು ನಾಟಿ ಮಾಡುತ್ತಿದ್ದ ಮಹಿಳೆಯರ ಸಾಲಿನಲ್ಲಿ ನಿಂತು ನಾಟಿ ಮಾಡಿದ್ದಾರೆ.

error: Content is protected !!

Join the Group

Join WhatsApp Group