ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಞಂಗಾಡು, ಜು. 06. ಕೆಎಸ್ಸಾರ್ಟಿಸಿ ಬಸ್ ಹಾಗೂ ಇನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.


ಮೃತಪಟ್ಟ ಯುವಕನನ್ನು ಅಲಿ (30) ಎಂದು ಗುರುತಿಸಲಾಗಿದೆ. ಇವರ ಸಂಬಂಧಿ ಕೊಡ್ಯಮೆಯ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕಾಞಂಗಾಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣೂರಿನಲ್ಲಿರುವ ಅಲಿಯ ಸಹೋದರಿಯ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಘಾತ ತಪ್ಪಿಸಲು ಬಸ್ ಅನ್ನು ಒಂದು ಬದಿಗೆ ಸರಿಸಿದ ಕಾರಣ ಘಟನೆಗೆ ಕಾರಣವಾಯಿತು ಎಂದು ತಿಳಿದುಬಂದಿದೆ.

Also Read  ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್

error: Content is protected !!
Scroll to Top