ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಪರೀಕ್ಷಾ ಮೊದಲ ದಿನವಾದ ಇಂದು ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.


ಡಿಡಿಪಿಐ ಮಲ್ಲೆಸ್ವಾಮಿ ಅವರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತರಬೇಕು, ಕೇರಳದಿಂದ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿರುವುದನ್ನು ಖಾತ್ರಿ ಪಡಿಸಿಕೊಂಡರು.

Scroll to Top