ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು‌‌..? ➤ ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ರಾಜಕೀಯ ಏಳು ಬೀಳುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ.

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, ಈ ಬಗ್ಗೆ ನಾನು ಯಾರ ಹೆಸರನ್ನು ಕೂಡಾ ಸೂಚಿಸಿಲ್ಲ. ಮುಂದಿನ ಮುಖ್ಯಮಂತ್ರಿಯ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು – ಬೀಳುಗಳ ಜೊತೆಗೆ ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿ ಭಾವುಕರಾಗಿದ್ದಾರೆ. ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ.

Also Read  ಶೀಘ್ರವೇ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸಿ ➤ ಸಚಿವ ಬೈರತಿ ಬಸವರಾಜ್ ಸೂಚನೆ

 

 

 

error: Content is protected !!
Scroll to Top