ಒಂದೆಡೆ ಕಿತ್ತು ತಿನ್ನುವ ಬಡತನ, ಇನ್ನೊಂದೆಡೆ ಕೆಲಸ ಸಿಗದ ಆತಂಕ ➤ ಅಣ್ಣ-ತಮ್ಮ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮೈಸೂರು, ಸೆ.26. ಮನೆಯಲ್ಲಿನ ಕಿತ್ತು ತಿನ್ನುವ ಬಡತನದ ನಡುವೆ ಕೆಲಸ ಸಿಗದ ಹಿನ್ನೆಲೆಯಲ್ಲಿ ಅಣ್ಣ – ತಮ್ಮಂದಿರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಸಹೋದರರನ್ನು ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಸಿದ್ಧರಾಜ್ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ. ಬಡತನದ ನಡುವೆ ಕೆಲಸ ಸಿಗದೆ ಚಿಂತಾಕ್ರಾಂತನಾಗಿದ್ದ ಸಿದ್ದರಾಜ್ ನಾಲ್ಕು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅಣ್ಣನ ಸಾವಿನ ಸುದ್ದಿ ತಿಳಿದ ತಮ್ಮ ನಾಗರಾಜ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಎಚ್.ಡಿ.ಕೋಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

 

error: Content is protected !!

Join the Group

Join WhatsApp Group