ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) Newskadaba.com ಉಡುಪಿ, ಅ. 11. ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ವ್ಯಕ್ತಿಯೋರ್ವರು ನೀರು ಪಾಲಾದ ಘಟನೆ ಶಿರ್ವದಲ್ಲಿ ಭಾನುವಾರದಂದು ನಡೆದಿದೆ.

ಮೃತರನ್ನು ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30)ಎಂದು ಗುರುತಿಸಲಾಗಿದೆ. ಇವರು ದೈವ ನರ್ತಕರಾಗಿದ್ದರು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಮಲ್ಪೆಯ ಮುಳುಗು ತಜ್ಞ ಈಶ್ವರ್ ಆಗಮಿಸಿ ಶೋಧಕಾರ್ಯ ಮುಂದುವರಿಸಿದ್ದಾರೆ.

error: Content is protected !!

Join the Group

Join WhatsApp Group