ಬೆಳ್ಳಾರೆ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಬೆಳ್ಳಾರೆ, ಅ. 15. ಯುವಕನೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಳ್ಯ ಗ್ರಾಮದ ಸಮಹಾದಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವನನ್ನು ಮುರುಳ್ಯ ಸಮಹಾದಿ ದಿ. ಶೀನ ಎಂಬವರ ಪುತ್ರ ಪ್ರದೀಪ್ (21) ಎಂದು ಗುರುತಿಸಲಾಗಿದೆ. ಈತ ಮನೆ ಸಮೀಪದ ಗುಡ್ಡವೊಂದರಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪುತ್ತೂರು ನೂತನ ಡಿವೈಎಸ್ಪಿ ವೀರಯ್ಯ ಹಿರೇಮಠ್ ಕರ್ತವ್ಯಕ್ಕೆ ಹಾಜರು

 

error: Content is protected !!
Scroll to Top