ಗ್ಯಾಸ್ ಟ್ಯಾಂಕ್‌ಗೆ ಬಿದ್ದು ಯುವಕರಿಬ್ಬರು ಮೃತ್ಯು ➤ ಗ್ಯಾಸ್ ಟ್ಯಾಂಕ್‌ ಸ್ವಚ್ಚಗೊಳಿಸುತ್ತಿದ್ದ ವೇಳೆ‌ ದುರ್ಘಟನೆ

(ನ್ಯೂಸ್ ಕಡಬ) Newskadaba.com ಉಜ್ಜಯಿನಿ, ಅ. 15. ಗ್ಯಾಸ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಟ್ಯಾಂಕ್‌ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) ಬಾಟ್ಲಿಂಗ್ ಸ್ಥಾವರದಲ್ಲಿ ನಡೆದಿದೆ.

ಮೃತರನ್ನು ರಾಜೇಂದ್ರ ಸಿಂಗ್(30) ಮತ್ತು ಲಖನ್ ಸಿಂಗ್(27) ಎಂದು ಗುರುತಿಸಲಾಗಿದೆ. ಗ್ಯಾಸ್ ಟ್ಯಾಂಕ್ ಅನ್ನು ಖಾಲಿ ಮಾಡಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎನ್ನಲಾಗಿದೆ.

Scroll to Top