ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನ ಅಪವಿತ್ರಗೊಳಿಸಿದ ಪ್ರಕರಣ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಇಲ್ಲಿನ ಪ್ರಸಿದ್ಧ ಕ್ಷೇತ್ರ ಕಾರಿಂಜ ಪರ್ವತದ ಮೇಲಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

ವೇಶ ಮಾಡಿ ಧಾರ್ಮಿಕ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ್ದಲ್ಲದೇ ವೀಡಿಯೋ ಮಾಡಿ ಅದನ್ನು ಹರಿಯಬಿಟ್ಟಿದ್ದಾರೆ. ಆರೋಪಿಗಳು, ದೇವಸ್ಥಾನ ಪೂಜಾ ಸ್ಥಳವೆಂದು ಗೊತ್ತಿದ್ದರೂ ದೇವಸ್ಥಾನಕ್ಕೆ ಚಪ್ಪಲಿ, ಶೂ ಧರಿಸಿ ಪ್ರವೇಶಿಸಿ ಅಪವಿತ್ರಗೊಳಿಸಿದ್ದು, ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿದ ಪೂಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!

Join the Group

Join WhatsApp Group