ಯಶಸ್ವಿ ‘ಆಪರೇಷನ್ ಚೀತಾ’ ಕಾರ್ಯಾಚರಣೆಗೆ ಊರವರ ಸಾಥ್ ➤ ಬಾವಿಯಿಂದ ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com ಕಡಬ, ನ.07. ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಯಶಸ್ವಿ ಕಾರ್ಯಾಚರಣೆಯ ಮೂಲಕ ಚಿರತೆಯನ್ನು ರಕ್ಷಿಸಿದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.

ಕೋಳಿಯನ್ನು ಹಿಡಿಯಲೆಂದು ಬಂದ ಚಿರತೆಯು ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಮುಂಭಾಗದ ಬಾವಿಗೆ ಬಿದ್ದಿದ್ದು, ಬಾವಿಯಿಂದ ನೀರು ಸೇದಲೆಂದು ತೆರಳಿದ ವೇಳೆ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಿಷಯ ತಿಳಿದ ಊರವರು ಸ್ಥಳಕ್ಕೆ ಧಾವಿಸತೊಡಗಿದ್ದು, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸೂಕ್ತ ಭದ್ರತೆಯೊಂದಿಗೆ ಸಂಜೆಯ ವೇಳೆಗೆ ಚಿರತೆಯ ರಕ್ಷಣಾ ಕಾರ್ಯವನ್ನು ಆರಂಭಿಸಿದ್ದಾರೆ. ಬೋನು ತಂದು ಬಾವಿಯ ಕಟ್ಟೆಯ ಸಮೀಪ ಇಟ್ಟು ಬಾವಿಯ ಮೇಲಿನ ಭಾಗಕ್ಕೆ ಬಲೆ ಹಾಸಿ ಏಣಿ ಇಳಿಸಲಾಗಿದ್ದು, ಏಣಿ ಹತ್ತಿದ ಚಿರತೆಯು ನೇರವಾಗಿ ಬೋನಿಗೆ ಬಿದ್ದಿದೆ. ಈ ಮೂಲಕ ಊರವರ ಸಹಕಾರದೊಂದಿಗೆ ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

 

 

 

error: Content is protected !!

Join the Group

Join WhatsApp Group