ಮೇಯಲು ಕಟ್ಟಿದ್ದ ದನ ಕಳವುಗೈದು ಮಾರಾಟಕ್ಕೆ ಯತ್ನ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ನ. 08. ಮನೆ ಸಮೀಪದ ತೋಟವೊಂದರಲ್ಲಿ ಮೇಯಲು ಕಟ್ಟಿ ಹಾಕಿದ್ದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶಿರ್ತಾಡಿ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ವಾಲ್ಪಾಡಿ ಗ್ರಾಮದ ಪವನ್ ಕುಮಾರ್, ಪುರಸಭೆ ವ್ಯಾಪ್ತಿಯ ಮಾರೂರಿನ ಸತೀಶ್ ಹಾಗೂ ಜಯಾನಂದ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಗಿರೀಶ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.  ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶ ಎಂಬವರು ಮನೆ ಸಮೀಪದ ತೋಟದಲ್ಲಿ ಮೇಯಲು ಕಟ್ಟಿದ್ದ ದನವನ್ನು ಕದ್ದೊಯ್ದ ಆರೋಪಿಗಳು ಮಾರಾಟಕ್ಕೆಂದು ಟೆಂಪೊವೊಂದರಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಕಂಡ ಸಾರ್ವಜನಿಕರು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group