ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಶಿಕ್ಷಕರ ತರಬೇತಿ ಕೇಂದ್ರಕ್ಕೆ ನುಗ್ಗಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಆರೋಪಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯನ್ನು ಕುಂದಾಪುರ ಮೂಲದ ನವೀನ್(31) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮಾನಸಿಕ ತೊಂದರೆ ಹಿನ್ನೆಲೆ ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಈತ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಬೆಡ್ ಶೀಟ್ ಬಳಸಿ ಕಿಟಕಿಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

Also Read  ಕರಿ ಮೆಣಸಿಗೆ ಜಿಎಸ್‌ಟಿ ರದ್ದು - ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಹೇಳಿದ ಬೆಳೆಗಾರರು

error: Content is protected !!
Scroll to Top