ಬಿ.ಸಿ.ರೋಡ್: ಕಾರು-ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಫರಂಗೀಪೇಟೆ, ನ. 21. ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪರಂಗಿಪೇಟೆ ಸಮೀಪದ ಅರ್ಕುಳ ಎಂಬಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ ಪುತ್ರ ಪ್ರಜ್ವಲ್(26) ಎಂದು ಗುರುತಿಸಲಾಗಿದೆ. ಮಂಗಳೂರಿನ NMPT ಉದ್ಯೋಗಿಯಾಗಿದ್ದ ಪ್ರಜ್ವಲ್ ಕೆಲಸದ ನಿಮಿತ್ತ ಕಂಪನಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪ್ರಜ್ವಲ್ ನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 

 

 

 

error: Content is protected !!

Join the Group

Join WhatsApp Group