ಸಮುದ್ರಕ್ಕೆ ಈಜಲು ಇಳಿದ ಯುವಕರ ತಂಡ ➤ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಭಟ್ಕಳ, ನ. 23. ಕನಕಪುರದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬಂದು ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ವರದಿಯಾಗಿದೆ.

ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಇನ್ನೋರ್ವ ಬಸವರಾಜು(21) ಎಂಬವನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ ಎನ್ನಲಾಗಿದೆ. ರಘುನಂದನ್ ನೀರಿನಲ್ಲಿ ಕೊಚ್ಚಿಹೋಗಿ ಕೆಲ ತಾಸುಗಳ ಬಳಿಕ ಆತನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಿದ್ದಾರೆ.

error: Content is protected !!

Join the Group

Join WhatsApp Group