ಸಂಘಪರಿವಾರವು ವಿದ್ಯಾರ್ಥಿಗಳ ಮೂಲಕ ಕೋಮುಗಲಭೆ ನಡೆಸಲು ಸಂಚು ರೂಪಿಸುತ್ತಿದೆ ➤ ಆರೋಪಿಗಳ ಬಂಧನವಾಗದೇ ಇದ್ದಲ್ಲಿ “ಪುತ್ತೂರು ಚಲೋ”- ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಪುತ್ತೂರಿನ ಸರಕಾರಿ ಪಿಯು ಕಾಲೇಜು ಕೊಂಬೆಟ್ಟಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಲ್ಲೆ, ತ್ರಿಶೂಲ ದಾಳಿ ಹಾಗೂ ಬೆದರಿಕೆಗಳು ನಡೆಯಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸಂಘಪರಿವಾರದ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಳ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಆರೋಪಿಸುತ್ತಿದೆ. ಅಲ್ಲದೇ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಎಬಿವಿಪಿ ಪುಂಡರನ್ನು ಮತ್ತು ಪ್ರಚೋದನೆ ನೀಡಿದ ಸಂಘಪರಿವಾರದ ನಾಯಕರನ್ನು ಶೀಘ್ರ ಬಂಧಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ.

 

ಪುತ್ತೂರು ತಾಲೂಕು ದ.ಕ ಜಿಲ್ಲೆಯಲ್ಲಿ ಎರಡನೇ ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಪರಸ್ಪರ ಸಾಮರಸ್ಯದಿಂದ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳು ಸೌಹಾರ್ದಯುತವಾಗಿ ವಿದ್ಯಾರ್ಜನೆ ಮಾಡುವುದನ್ನು ಸಹಿಸದ ಸಂಘಪರಿವಾರ ದುಷ್ಕರ್ಮಿಗಳು, ABVP ಸಂಘಟನಾ ಕಾರ್ಯಕರ್ತರ ಮೂಲಕ ತಾಲೂಕಿನ ಎಲ್ಲಾ ಕಾಲೇಜಿನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ. ಸಂಘಪರಿವಾರದ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮತ್ತು ಚಿನ್ಮಯ ಎಂಬವರ ಒಂದು ತಂಡವು ಎಲ್ಲಾ ಕಾಲೇಜುಗಳಿಗೆ ತೆರಳಿ ಹಿಂದು ಹುಡುಗಿಯರ ರಕ್ಷಣೆ ಹಾಗೂ ಲವ್ ಜಿಹಾದ್ ಮುಂತಾದ ಮತೀಯ ವಿಚಾರಗಳ ಬಗ್ಗೆ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುವಂತೆ ಮತ್ತು ಯಾರಾದರೂ ಹಿಂದೂ ಹುಡುಗಿಯರ ಬಳಿ ಮಾತನಾಡಿದರೆ ಹಲ್ಲೆ ಮಾಡುವಂತೆ ಪ್ರಚೋದಿಸಿದ್ದಾರೆ. ಅಲ್ಲದೇ ಕಳೆದ ವಾರ ಸರಕಾರಿ ಪಿಯು ಕಾಲೇಜು ಕೊಂಬೆಟ್ಟು ಪರಿಸರದ ನಟರಾಜ ವೇದಿಕೆಗೆ ಹಿಂದೂ ವಿದ್ಯಾರ್ಥಿಗಳನ್ನು ಕರೆಸಿ ಕಾರ್ಯಕ್ರಮ ಕೂಡಾ ನಡೆಸಿದ್ದಾರೆ. ಸಂಘಪರಿವಾರದ ಕೋಮು ಪ್ರಚೋದನೆಗೆ ಒಳಗಾಗಿ ಕೊಂಬೆಟ್ಟು ಕಾಲೇಜಿನಲ್ಲಿ ಇತ್ತೀಚಿಗೆ ನಾಲ್ಕು ಹಲ್ಲೆ ಪ್ರಕರಣಗಳು ನಡೆದಿದೆ, ಇದೆಲ್ಲವೂ ಕ್ಷುಲ್ಲಕ ವಿಚಾರವನ್ನು ನೆಪವಾಗಿಟ್ಟುಕೊಂಡು ನಡೆದ ಘಟನೆಯಾಗಿದೆ. ಮೂರನೇ ಘಟನೆಯಲ್ಲಿ ಹಲ್ಲೆಯಾದ ವಿದ್ಯಾರ್ಥಿಗೆ ನ್ಯಾಯ ಒದಗಿಸುವಂತೆ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಡೆಸಿದ್ದವು ಅಲ್ಲದೇ ಕಾಲೇಜಿಗೆ ನಿಯೋಗ ತೆರಳಿ ಹಲ್ಲೆ ಮಾಡಿದ ಎಬಿವಿಪಿ ಪುಂಡರನ್ನು ಅಮಾನತು ಮಾಡುವಂತೆ ಕೋರಲಾಗಿತ್ತು. ಇದನ್ನರಿತ ಸಂಘಪರಿವಾರಿವು ಹಿಂದು ವಿದ್ಯಾರ್ಥಿಗಳಿಗೆ ‘ಹಲ್ಲೆ ಯತ್ನವಾಗಿದೆ’ ಎಂದು ಗಾಳಿ ಸುದ್ದಿ ಹರಡಿ ಬುಧವಾರದಂದು ಎಬಿವಿಪಿ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಮಾಡಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಲಾಗಿದೆ‌. ಈ ಪ್ರತಿಭಟನೆಗೆ ಸಂಘಪರಿವಾರವು ಹೊರಗಿನ ಹಲವು ಕಾರ್ಯಕರ್ತರನ್ನೂ ಸೇರಿಸಿ ಅಲ್ಲಿ ಕೈಫುದ್ದೀನ್, ಇಮ್ರಾನ್ ಹಾಗೂ ತೌಸೀಫ್ ಎಂಬ ವಿದ್ಯಾರ್ಥಿಗಳಿಗೆ ವಿನಾಕಾರಣ ತ್ರಿಶೂಲದಿಂದ ಹಲ್ಲೆ ಮಾಡಿದ್ದಾರೆ.

Also Read   ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

 

ಒಟ್ಟಾರೆ ಘಟನೆಯನ್ನು ನೋಡುವಾಗ ಸಂಘಪರಿವಾರವು ವಿದ್ಯಾರ್ಥಿಗಳನ್ನು ಬಳಸಿ ಅವರ ಕೈಗೆ ಆಯುಧಗಳನ್ನು ನೀಡಿ ಕೋಮುಗಲಭೆಗೆ ಪ್ರಚೋದಿಸುತ್ತಿರುವುದು ಸ್ಪಷ್ಟವಾಗುತ್ತಿದೆ. ಇದೆಲ್ಲಾ ನಡೆಯುತ್ತಿದ್ದರೂ ಪೋಲಿಸ್ ಇಲಾಖೆಯು ಮೌನವಾಗಿರುವುದು ಅನುಮಾನಾಸ್ಪದ. ಅದುದರಿಂದ ಈ ಎಲ್ಲಾ ಘಟನೆಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಇಲಾಖೆಯು ಉನ್ನತ ಅಧಿಕಾರಿಗಳನ್ನು ನೇಮಿಸಿಬೇಕು. ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆ ನೀಡಿ ಅಮಾಯಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ತ್ರಿಶೂಲದಿಂದ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸದಿದ್ದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳನ್ನು ಸೇರಿಸಿ “ಪುತ್ತೂರು ಚಲೋ” ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಮೂಲಕ ಕ್ಯಾಂಪಸ್ ಫ್ರಂಟ್ ಎಚ್ಚರಿಸುತ್ತಿದೆ‌.

Also Read  ಅರಣ್ಯದಿಂದ ಮರ ಸಾಗಾಟ- ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆ

ಈ ಸಂದರ್ಭದಲ್ಲಿ ಅನೀಸ್ ಕುಂಬ್ರ ( ರಾಜ್ಯ ಪ್ರ.ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಕರ್ನಾಟಕ), ಸವಾದ್ ಕಲ್ಲರ್ಪೆ ( ರಾಜ್ಯ ಕೋಶಾಧಿಕಾರಿ, ಕ್ಯಾಂಪಸ್ ಫ್ರಂಟ್ ಕರ್ನಾಟಕ), ರಿಯಾಝ್ ಅಂಕತ್ತಡ್ಕ ( ಜಿಲ್ಲಾ ಮುಖಂಡ ಕ್ಯಾಂಪಸ್ ಫ್ರಂಟ್ ದ.ಕ), ಮುಸ್ತಫಾ ಕೊಡಿಪ್ಪಾಡಿ( ಜಿಲ್ಲಾ ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಪುತ್ತೂರು) ಮೊದಲಾದವರು ಉಪಸ್ಥಿತರಿದ್ದರು.

 

error: Content is protected !!
Scroll to Top