ಬೇಲೂರಿನಲ್ಲಿ ರಸ್ತೆ ಅಪಘಾತ ➤ ಬೆಳ್ತಂಗಡಿಯ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 20. ಆಲ್ಟೋ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿಯ ವ್ಯಕ್ತಿಯೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

ಮೃತರನ್ನು ಪೆರಾಲ್ದರಕಟ್ಟೆಯ ಶರೀಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನೂರ್ ಮುಹಮ್ಮದ್, ಬಳಂಜದ ಅಝೀಝ್ ಹಾಗೂ ಕಕ್ಕಿಂಜೆಯ ಗಾಂಧಿನಗರ ನಿವಾಸಿ ಸಲೀಂ ಎಂದು ಗುರುತಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊರೆದೊಯ್ಯಲಾಗಿದೆ. ಇವರೆಲ್ಲ ಸಂಬಂಧಿಗಳು ಹಾಗೂ ಸ್ನೇಹಿತರಾಗಿದ್ದು ಗಾರೆ ಹಾಗೂ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ಒಟ್ಟಿಗೆ ದರ್ಗಾ ಝಿಯಾರತ್ ಗೆಂದು ಬೇಲೂರು ಭಾಗಕ್ಕೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Also Read  ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!!

error: Content is protected !!
Scroll to Top