ಸ್ಕೂಟರ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನರಿಮೊಗರು, ಡಿ. 28. ಸ್ಕೂಟರ್ ಹಾಗೂ ರಿಕ್ಷಾ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ತಂತ್ರವರ್ಗದ ಸಹಾಯಕ ಮಧುಸೂಧನ್ ಹಾಗೂ ರಿಕ್ಷಾ ಚಾಲಕ ರಜಾಕ್ ಎಂದು ಗುರುತಿಸಲಾಗಿದೆ. ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ತಂತ್ರಿವರ್ಗದ ಸಹಾಯಕ ಅರ್ಚಕ ಮಧುಸೂಧನ್ ಅವರು ರಾತ್ರಿ ದೈವದ ನೇಮ ಮುಗಿಸಿ ತನ್ನ ಸ್ಕೂಟರ್ ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.

Also Read  ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ

 

error: Content is protected !!
Scroll to Top