ಅಕ್ರಮ ಮರಳು ಸಾಗಾಟ ತಡೆಗಟ್ಟಲು ನಿಗ್ರಹ ದಳ ಸ್ಥಾಪನೆ ➤ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ನಿಗ್ರಹ ದಳದ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ. ಈ ದಳದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಮಾಜಿ ಸೈನಿಕರು 2022ರ ಜ.10ರ ಸೋಮವಾರ ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top