ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ➤ ದ.ಕ‌. ಜಿಲ್ಲಾದ್ಯಂತ ರಿಕ್ರಿಯೇಷನ್ ಕ್ಲಬ್ ಬಂದ್ ಗೆ ಡಿ.ಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದಿನದಿಂದ ದಿನಕ್ಕೆ ಕೊರೋನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ದ.ಕ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಕ್ಲಬ್ ಗಳಲ್ಲಿ ಸಾಮಾಜಿಕ ಅಂತರ ಕಾಪಾಡದೇ ಇರುವುದೇ ಕೊರೋನಾ ವೈರಸ್ ಸುಲಭವಾಗಿ ಹರಡಲು ಕಾರಣ. ಆದುದರಿಂದ ಮುಂದಿನ ಆದೇಶದವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ರಿಕ್ರಿಯೇಷನ್ ಕ್ಲಬ್‌ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

Also Read  ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ

 

 

error: Content is protected !!
Scroll to Top