ರಿಸಲ್ಟ್ ಪ್ರಕಟಗೊಂಡ ಬೆನ್ನಲ್ಲೇ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ರಾಜ್ಯದ ಪಿಎಸ್ಐ ಪರೀಕ್ಷಾ ಫಲಿತಾಂಶದ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಆರೋಪ ಕೇಳಿಬಂದಿದ್ದು, ಅಲ್ಲದೇ ಪಿಎಸ್ಐ ನೇಮಕಾತಿ ಸಮಿತಿ ಅಧ್ಯಕ್ಷರಾಗಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಹಲವು ಅಭ್ಯರ್ಥಿಗಳು ದೂರು ನೀಡಿದ್ದಾರೆ.

ಈ ಕುರಿತು ಬೆಂಗಳೂರು ನಗರ ಸುಬ್ರಹ್ಮಣ್ಯಪುರ ಠಾಣಾ ಹೆಡ್ ಕಾನ್ಸ್ಟೇಬಲ್ ಡಿ.ಆರ್. ಮೋಹನ್ ಕುಮಾರ್ ಅವರು ದೂರು ನೀಡಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ -1ರ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನ ಮಾಡಿ ಅಂಕಗಳ ಮರುಎಣಿಕೆ ಮಾಡುವ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಪತ್ರಿಕೆ -1ರಲ್ಲಿ ಹೆಚ್ಚು ಅಂಕಗಳಿಸಲು ಸಾಧ್ಯವಾಗಿಲ್ಲ. ಬ್ಲೂಟುತ್ ಬಳಸಿ ಪರೀಕ್ಷೆ ಬರೆದಿರುವ ಸಂಶಯವಿದೆ ಎಂದೂ ಕೆಲವರು ದೂರಿನಲ್ಲಿ ತಿಳಿಸಿದ್ದಾರೆ.

Also Read  ಹಿಜಾಬ್ ವಿವಾದ- ಸೋಮವಾರದಿಂದ ಹತ್ತನೇ ತರಗತಿವರೆಗೆ ಶಾಲೆ ಆರಂಭ ➤ ಸಿಎಂ ಬೊಮ್ಮಾಯಿ

 

error: Content is protected !!
Scroll to Top