ರೈತರ ಸಾಲಮನ್ನಾ ಪ್ರಸ್ತಾಪ ಸರಕಾರದ ಮುಂದಿಲ್ಲ ➤ ಸಚಿವ ಎಸ್.ಟಿ ಸೋಮಶೇಖರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಸಹಕಾರಿ ಸಂಘಗಳ ಮೂಲಕ ರೈತರು ಪಡೆದಂತಹ ಸಾಲವನ್ನು ಮನ್ನಾ ಮಾಡುವ ಕುರಿತಂತೆ ಯಾವುದೇ ಪ್ರಸ್ತಾಪ ರಾಜ್ಯ ಸರಕಾರದ ಮುಂದಿಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.


ಈ ಕುರಿತು ಮಾತನಾಡಿದ ಅವರು, ಸಹಕಾರಿ ಸಂಘದಿಂದ ರೈತರು ಮಾಡಿದ ಸಾಲ ಮನ್ನಾ ಮಾಡುವ ಪ್ರಸ್ತಾಪವಿಲ್ಲ, ಹೆಚ್ಚಿನ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡಿ ಮಾರ್ಚ್ ಕೊನೆಯಲ್ಲಿ 30 ಲಕ್ಷ ರೈತರಿಗೆ ಸಾಲ ನೀಡುವ ಗುರಿ ಮುಟ್ಟಲಾಗುವುದು ಎಂದು ತಿಳಿಸಿದ್ದಾರೆ.

 

Scroll to Top