ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಪ್ಪೆಪದವು, ಜ. 28. ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿ ನಾಗರಾಜ್ ರಾವ್ ಎಂದು ಗುರುತಿಸಲಾಗಿದೆ. ಇವರು ಬ್ಯಾಂಕ್ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಗುರುವಾರದಂದು ರಾತ್ರಿ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನ್ನು ಕಂಡು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Scroll to Top