ಕಡಬ: ಕಳಾರ ಸಮೀಪ ಬೆಂಕಿ ಆಕಸ್ಮಿಕ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜ. 28. ಇಲ್ಲಿನ ಕಳಾರ ಸಮೀಪ ರಸ್ತೆ ಬದಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಮತಟ್ಟು ಪ್ರದೇಶ ಉರಿದಿದ್ದು ಕಡಬ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಶುಕ್ರವಾರ ಮಧ್ಯಾಹ್ನದ ವೇಳೆ ಟ್ರಾನ್ಸ್ ಫಾರ್ಮರಿನಿಂದ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುತ್ತ ಮುತ್ತಲಿನ ಹುಲ್ಲು ತುಂಬಿದ ಪ್ರದೇಶಕ್ಕೆ ಬೆಂಕಿ ಹಬ್ಬಿತ್ತು. ಈ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ತೆರಳಿದ ಎಸ್.ಐ ರುಕ್ಮ ನಾಯ್ಕ್, ಎ.ಎಸ್.ಐ ಚಂದ್ರಶೇಖರ್, ಹೆಡ್ ಕಾನ್ಸ್ಟೇಬಲ್ ಭವಿತ್ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಶಿಕ್ಷಕನ ಹಿಂಸೆಯಿಂದ ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ವಿದ್ಯಾರ್ಥಿನಿ ► ಹುಟ್ಟೂರು ಉಪ್ಪಿನಂಗಡಿಗೆ ಬಂತು ಬಾಲಕಿಯ ಮೃತದೇಹ

 

 

error: Content is protected !!
Scroll to Top