ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು..

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸಜಿಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

ಮೃತ ಸವಾರನನ್ನು ಕುಮ್ಡೇಲು ನಿವಾಸಿ ಸನ್ವಿತ್ ಎಂದು ಗುರುತಿಸಲಾಗಿದೆ. ಈತ ಸಜೀಪ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕೊಣಾಜೆ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top